Skip to main content

ಕವನ ಕವಿತೆಗೆ ಇರುವ ವ್ಯತ್ಯಾಸ

ಕವನ
1). ಇದರಲ್ಲಿ ನಾಲ್ಕು ಅಥವಾ ಆರು ಸಾಲಿನ ಚೌಕಟ್ಟಿರುತ್ತದೆ.
2). ಕವನದಲ್ಲಿ ಶೃಂಗಾರವನ್ನು ಬಿಂಬಿಸುವ ರಮಣೀಯ ಪದಗಳು ಹೆಚ್ಚಾಗಿರುತ್ತವೆ.
3). ಪ್ರತಿ ಪದಗಳ ಬಳಕೆ ಓದುಗನಿಗೆ ಮುದ ನೀಡುವಂತೆ ರಚಿತವಾಗಿರುತ್ತದೆ.
4). ನವ, ನವೀನವಾದ ಪದಗಳ ಬಳಕೆಗೆ ಹೆಚ್ಚಿನ ಆಧ್ಯತೆ ಇರುತ್ತದೆ.
5). ಇದರಲ್ಲಿನ ವಿಷಯವಸ್ತು ಶೃಂಗಾರ ಹಾಸ್ಯದಿಂದ ಹಿಡಿದು ಎಲ್ಲವನ್ನು ಸೂಕ್ಷ್ಮವಾಗಿ ಪ್ರತಿಪಾದಿಸಲಾಗಿರುತ್ತದೆ.
6). ಆಧುನಿಕತೆಗೆ ಒತ್ತು ನೀಡಿ ರಚಿಸಲಾಗುತ್ತದೆ.
7). ಸರಳ ಹಾಗೂ ಸುಂದರವಾದ ಪದಬಳಕೆಯಿಂದ ಕೂಡಿರುತ್ತದೆ.
8). ಕೆಲವುಕಡೆ ವಿವಿಧ ರೀತಿಯ ಪ್ರಾಸಕ್ಕೆ ತುಂಬಾ ಪ್ರಾಮುಖ್ಯತೆ ನೀಡಿ ರಚಿಸಲಾಗುತ್ತದೆ.
9). ಎರಡು ಅಥವಾ ಮೂರು ಸಾಲಿನಿಂದ ರಚಿತವಾದ ಕವನಗಳಿಗೆ ಹೈಕು/ಹನಿಗವನ/ಚುಟುಕು ಎಂದು ಕರೆಯಲಾಗಿದ್ದು, ಇದನ್ನು ಮನೋಹರವಾಗಿ, ಲಘುವಾಗಿ ರಚಿಸಬಹುದಾಗಿದೆ.
10). ವರ್ಣರಂಜಿತ ಪದಗಳಿಂದ ತುಂಬಿದ್ದು ಸಕಾರ ಮತ್ತು ವಿರಾಳ ಭಾವವನ್ನು ಮೂಡಿಸುವುದರಲ್ಲಿ ಸಫಲತೆಯನ್ನು ಕಂಡುಕೊಂಡಿರುತ್ತದೆ.
_________________________
ಕವಿತೆ
1). ಇದರಲ್ಲಿ ಯಾವ ಚೌಕಟ್ಟುಗಳು ಇರುವುದಿಲ್ಲ.
2). ಇದರಲ್ಲಿ ಸಾಮಾಜಿಕ, ಧಾರ್ಮಿಕ ಸೇರಿದಂತೆ ಎಲ್ಲ ವಿಷಯಗಳನ್ನಿಟ್ಟುಕೊಂಡು ಬರೆಯಬಹುದಾಗಿದೆ.
3). ಎಲ್ಲ ರೀತಿಯ ಪದಗಳ ಬಳಕೆ ಮಾಡಿ ಬರೆಯಲಾಗುತ್ತದೆ.
4). ಕವಿತೆ ಪ್ರಾಸ, ಸರಳತೆ ಹಾಗೂ ಲಯಬದ್ಧತೆಯಿಂದ ಕೂಡಿರುತ್ತದೆ.
5). ಬಹುತೇಕ ರಚನೆಗಳು ಹೆಚ್ಚೆಚ್ಚು ಸಾಲುಗಳಿಂದ ಕೂಡಿದ್ದು ಉತ್ತಮವಾದ ಸಂದೇಶವನ್ನು ನೀಡುತ್ತವೆ.
6). ಕೆಲವರು ಕ್ಲಿಷ್ಟಕರವಾದ ಪದಗಳ ಬಳಕೆ ಮಾಡಿದರೆ, ಇನ್ನೂ ಕೆಲವರು ತೀರಾ ಸರಳವಾದ ಪದಗಳನ್ನು ಬಳಸಿ ಬರೆಯುವುದು ಕವಿತೆಯ ವೈಶಿಷ್ಟ್ಯತೆ.
7). ಎಲ್ಲರಲ್ಲಿ ಉತ್ತಮ ಮನೋಭಾವ ಮೂಡಿಸಲು ಕವಿತೆ ಸಹಕಾರಿಯಾಗುವಂತೆ ರಚಿಸಬೇಕಾಗುತ್ತದೆ.
8). ಇದರಲ್ಲಿನ ಉದ್ದೇಶ ಸಮಾಜ ಸುಧಾರಣೆಗೆ ಹೆಚ್ಚಿನ ಒತ್ತು ಕೊಡುವಂತಿರಬೇಕು.
9). ಒಂದು ಕವಿತೆಯಲ್ಲಿ ಹಲವು ರೀತಿಯ ಆಯಾಮಗಳು ಒಗ್ಗೂಡಿಸಿ ಬರೆಯಬಹುದು.
10). ಮನಸ್ಸಿನಲ್ಲಿ ಮೂಡುವ ನೋವು-ನಲಿವು, ಕಷ್ಟ-ಸುಖ, ಸರಸ-ವಿರಸ ಎಲ್ಲಾ ಭಾವನೆಗಳಿಗೆ ವಿಸ್ತಾರ ರೂಪಕೊಟ್ಟು ಬರೆಯಬೇಕೆನ್ನುವುದು ಕವಿತೆಯಲ್ಲಿನ ವಿಶೇಷತೆಯಾಗಿರುತ್ತದೆ.
________________________
  
*ಸಂಗ್ರಹ ಮುದ್ದು ಚೀಕು ಗೆಳೆಯರ ಬಳಗ*

Comments

Popular posts from this blog

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲ...

ಶಿಶು ಪ್ರಾಸ ಗೀತೆ

ಶಿಶು ಪ್ರಾಸ ಗೀತೆ  ಕಾವ್ಯಕೂಟ ಸ್ಪರ್ಧೆಗಾಗಿ   1  ಚುಕು ಚುಕು ಎನ್ನುವ ರೈಲು ಪುಟ್ಟನ ಕೈಯಲಿ ಕೋಲು ತಂಗಿಯೂ ಬಂದಳು ಜತೆಗೆ ಆಟವ ಆಡಲು ಹೊರಗೆ   2..ತುಂಟನು ನಮ್ಮ ಪುಟ್ಟ ತಂಟೆಯ ಮಾಡುತ ಬಿದ್ದ ಅಮ್ಮನು ಕೊಟ್ಟಳು ಪೆಟ್ಟು ಕೂಗುತ ಓಡಿದ  ಎದ್ದು ಬಿದ್ದು ಪಂಕಜಾ.ಕೆ.ಮುಡಿಪು 18.6 2020

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...