Skip to main content

ಲೇಖನ


ಲೇಖನ 

ವಿಷಯ .ಭ್ರಷ್ಟಾಚಾರ,ರಾಜಕಾರಣ ಮತ್ತು ಸಾಹಿತ್ಯ ನಿರ್ಮಾಣದ ಸವಾಲುಗಳು

ಬ್ರಷ್ಟಾಚಾರವೆನ್ನುವುದು ಇಂದಿನ ದಿನಗಳಲ್ಲಿ ಜನಮಾನಸದಲ್ಲಿ ಹಾಸು ಹೊಕ್ಕಾಗಿದೆ.  ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸ ವಾಗಬೇಕಿದ್ದರೂ ದುಡ್ಡು ಕೊಟ್ಟರೆ ಮಾತ್ರ ಕೆಲಸ ಆಗಲು ಸಾಧ್ಯ.
ದುಡ್ಡು ಇಲ್ಲದವನನ್ನು ಕೇಳುವವರೇ ಇಲ್ಲವೆಂದಾಗಿದೆ.  ಬ್ರಷ್ಟಾಚಾರವು ಸ್ವಚ್ಛ ಸಮಾಜಕ್ಕೆ ಅಂಟಿದ ಕಳಂಕ.ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಬ್ರಷ್ಟಾಚಾರವು ದಿನದಿಂದ ದಿನಕ್ಕೆ  ತನ್ನ ಕಬಂಧ ಬಾಹುವನ್ನು ಚಾಚಿ ಎಲ್ಲೆಡೆಯೂ ಹಬ್ಬಿದೆ .  ರಾಜಕಾರಣವು ಅವ್ಯವಸ್ಥೆಯ ಆಗರವಾಗಿದೆ. ಮೇಲಿನಿಂದ ಕೆಳಗಿನವರೆಗೂ,ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.ಜನಸಾಮಾನ್ಯ ಇದರ ಕಪಿ ಮುಷ್ಠಿಯಲ್ಲಿ ಸಿಲುಕಿ ನರಳುತ್ತಿದ್ದಾನೆ . ಪ್ರತಿಯೊಬ್ಬರು ತಮ್ಮ ಸುಖವನ್ನು ಮಾತ್ರ ಕಂಡು ಕೊಳ್ಳುವ ಮನೋಭಾವ ಬೆಳೆಸಿಕೊಂಡಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಕ್ಕಾಗಿ ಮೀಸಲಿಟ್ಟ ಹಣವೆಲ್ಲವು ಭ್ರಷ್ಟ ರಾಜಕಾರಣಿಗಳಿಂದಾಗಿ ಸೇರಬೇಕಾದ ಕಡೆ ಸೇರದೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದೆ. ಬ್ರಷ್ಟಾಚಾರವೆನ್ನುವುದು ಎಂದು ನಿರ್ಮೂಲನವಾಗುವುದೋ ಅಂದೇ ಭವ್ಯ ಭಾರತದ ನಿರ್ಮಾಣ ಸಾಧ್ಯ.ಆದರೆ ಪಾರ್ಥೇನಿಯಂ ಕಳೆಯಂತೆ ಇದರ ನಿಯಂತ್ರಣ ಸುಲಭವಲ್ಲ.
          ಬ್ರಷ್ಟಾಚಾರವು ಸಾಹಿತ್ಯಕ್ಷೇತ್ರಕ್ಕೂ ತನ್ನ ಕಬಂಧ ಬಾಹುವನ್ನು ಚಾಚಿದೆ .ಇದರಿಂದಾಗಿ ಅರ್ಹರಿಗೆ ಅವಕಾಶ ಸಿಗದೆ ಅನರ್ಹರೇ  ಗುರುತಿಸಿಕೊಳ್ಳುವಂತಾಗಿದೆ.ಹಣ ಕೊಟ್ಟು ಪ್ರಶಸ್ತಿ ಪಡೆಯುವ ಒಂದು ಗುಂಪೇ ಇಲ್ಲಿ ತುಂಬಿ ತುಳುಕಿದೆ .ಇದರಿಂದಾಗಿ ಅರ್ಹ ಸಾಹಿತಿಗಳು ಪ್ರಶಸ್ತಿಯಿಂದ ವಂಚಿತರಾಗುವ ದೌರ್ಭಾಗ್ಯ ಬಂದೊದಗಿದೆ.   ಹಣದ ಆಮಿಷಕ್ಕೆ ಬಲಿಯಾಗದೆ ಅರ್ಹರನ್ನು ಗುರುತಿಸಿ, .ಪ್ರೋತ್ಸಾಹಿಸುವ ಕೆಲಸ ಮಾಡುವವರಿದ್ದರೆ ಮಾತ್ರ ಸಾಹಿತ್ಯ ಕ್ಷೇತ್ರ ಉಳಿಯಲು ಸಾಧ್ಯ .ಇಲ್ಲವಾದರೆ ಸಾಹಿತ್ಯ  ಎನ್ನುವುದು ಒಂದು ಪ್ರಶಸ್ತಿಗಳನ್ನು ಕೊಂಡು ಕೊಳ್ಳುವ ಸಂತೆಯಾದರೂ ಅಚ್ಚರಿಯಿಲ್ಲ
          
          ಪಂಕಜಾ.ಕೆ. ಮುಡಿಪು
          ನಿವೃತ್ತ ಅಸ್ಸಿಸ್ಟಂಟ್ ಪೋಸ್ಟ್ ಮಾಸ್ಟರ್ 
          ಶ್ರೀ ಗಣೇಶಕೃಪಾ. ಮುಡಿಪು. ಅಂಚೆ.ಕುರ್ನಾಡು.ದ.ಕ.574153

Comments

Popular posts from this blog

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲ...

ಶಿಶು ಪ್ರಾಸ ಗೀತೆ

ಶಿಶು ಪ್ರಾಸ ಗೀತೆ  ಕಾವ್ಯಕೂಟ ಸ್ಪರ್ಧೆಗಾಗಿ   1  ಚುಕು ಚುಕು ಎನ್ನುವ ರೈಲು ಪುಟ್ಟನ ಕೈಯಲಿ ಕೋಲು ತಂಗಿಯೂ ಬಂದಳು ಜತೆಗೆ ಆಟವ ಆಡಲು ಹೊರಗೆ   2..ತುಂಟನು ನಮ್ಮ ಪುಟ್ಟ ತಂಟೆಯ ಮಾಡುತ ಬಿದ್ದ ಅಮ್ಮನು ಕೊಟ್ಟಳು ಪೆಟ್ಟು ಕೂಗುತ ಓಡಿದ  ಎದ್ದು ಬಿದ್ದು ಪಂಕಜಾ.ಕೆ.ಮುಡಿಪು 18.6 2020

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...