Skip to main content

ಪರಿಸರ ಜಾಗೃತಿ ಲೇಖನ

ನೆನಪಿನ ನಾವಿಕ  ಸಾಹಿತ್ಯವೇದಿಕೆ ಲೇಖನ ಸ್ಪರ್ಧೆಗಾಗಿ
 
 
ವಿಷಯ..ಪರಿಸರ ಜಾಗೃತಿ


ಹಸಿರು ಕಾಡು ಗುಡ್ಡಗಳಿಂದ ತುಂಬಿದ ಪ್ರಕೃತಿಯೇ ಪರಿಸರ. ಪರಿಸರದ ಅಳಿವು ಉಳಿವು ಮನುಜನ  ಕೈಯಲ್ಲಿದೆ. ಪ್ರತಿಯೊಬ್ಬರೂ ತಮ್ಮ ಸುತ್ತುಮುತ್ತಲಿನ ಪರಿಸರ ಹಸಿರಾಗಿ ಇರುವಂತೆ ನೋಡಿಕೊಳ್ಳಬೇಕು .ಹಸಿರು ಇದ್ದರೆ ಮಾತ್ರ ನಾವು ಉಸಿರಾಡಲು ಸಾಧ್ಯ . ಮಾನವನ ದುರಾಸೆಗೆ ಇಂದು ಪ್ರಕೃತಿ ನಾಶವಾಗುತ್ತಿದೆ .ಎಲ್ಲೆಂದರಲ್ಲಿ ಕಸದ ತ್ಯಾಜ್ಯಗಳನ್ನು ಎಸೆದು  ಕಾಡು ಗುಡ್ಡಗಳನ್ನು ಕಡಿದು ಕಾಂಕ್ರೀಟ್ ಕಟ್ಟಡಗಳನ್ನು ಕಟ್ಟುತ್ತಾ  ಭೂಗರ್ಭಕ್ಕೆ ಕನ್ನ ಹಾಕಿ ನೀರಿನ ಒರತೆಯನ್ನು ಬತ್ತಿಸಿ,ಪ್ರಕೃತಿಯನ್ನು  ಮಲಿನ ಮಾಡುವ ಮನುಜ ತನ್ನ ಗೋರಿಯನ್ನು ತಾನೇ ತೋಡಿಕೊಳ್ಳುತ್ತಿದ್ದಾನೆ.ಪರಿಸರ ನಾಶದಿಂದ ಕೊರೊನಾದಂತ ಕಂಡು ಕೇಳದ ರೋಗವು ಮಾನವನನ್ನು ಬಾಧಿಸುತ್ತಿದೆ..ಸ್ವಚ್ಛ ಸುಂದರ ಪರಿಸರ ಆರೋಗ್ಯವನ್ನು ಕೊಡುತ್ತದೆ.ದೇವರು ಯಥೇಚ್ಛವಾಗಿ ಕೊಟ್ಟ ಶುದ್ಧ ಗಾಳಿ ನೀರು  ಜಗದ ಜೀವಿಗಳಿಗೆ ಒಂದು ವರವಿದ್ದಂತೆ  ಬುದ್ದಿಜೀವಿಯಾದ ಮನುಜ  ಪರಿಸರದ ಉಳಿವಿನ ಬಗ್ಗೆ ತಿಳಿದುಕೊಂಡು ಅದರ  ರಕ್ಷಣೆ  ತನ್ನ ಹೊಣೆಯೆಂದು ತಿಳಿಯಬೇಕು  ಪರಿಸರ ದಿನಾಚಾರಣೆಯು ಕೇವಲ ಆಚರಣೆಯಾಗದೆ ಕಾರ್ಯರೂಪಕ್ಕೆ ಬರುವಂತಾಗಬೇಕು .ಪ್ರಚಾರಕ್ಕಾಗಿ ಗಿಡಗಳನ್ನು  ನೆಡದೆ  ಸ್ವ ಇಚ್ಛೆಯಿಂದ ಗಿಡಗಳನ್ನು ನೆಟ್ಟು ಪೋಷಿಸಿ ಪ್ರಕೃತಿ ರಕ್ಷಣೆ ಮಾಡಿದರೆ  ಮುಂಬರುವ ದಿನಗಳಲ್ಲಿ ಮಾನವ ಆರೋಗ್ಯವಂತನಾಗಿ ದೀರ್ಘಾಯುಷಿಗಳಾಗಿ ಬಾಳಬಹುದು ಈ ಬಗ್ಗೆ ಪ್ರತಿಯೊಬ್ಬರೂ ಚಿಂತಿಸಬೇಕಾದ ಕಾಲ ಬಂದಿದೆ

ಶ್ರೀಮತಿ.ಪಂಕಜಾ.ಕೆ. ಮುಡಿಪು

Comments

Popular posts from this blog

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲ...

ಶಿಶು ಪ್ರಾಸ ಗೀತೆ

ಶಿಶು ಪ್ರಾಸ ಗೀತೆ  ಕಾವ್ಯಕೂಟ ಸ್ಪರ್ಧೆಗಾಗಿ   1  ಚುಕು ಚುಕು ಎನ್ನುವ ರೈಲು ಪುಟ್ಟನ ಕೈಯಲಿ ಕೋಲು ತಂಗಿಯೂ ಬಂದಳು ಜತೆಗೆ ಆಟವ ಆಡಲು ಹೊರಗೆ   2..ತುಂಟನು ನಮ್ಮ ಪುಟ್ಟ ತಂಟೆಯ ಮಾಡುತ ಬಿದ್ದ ಅಮ್ಮನು ಕೊಟ್ಟಳು ಪೆಟ್ಟು ಕೂಗುತ ಓಡಿದ  ಎದ್ದು ಬಿದ್ದು ಪಂಕಜಾ.ಕೆ.ಮುಡಿಪು 18.6 2020

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...