Skip to main content

ಹಬ್ಬ ಕಥೆ

ಸ್ಪರ್ಧೆಗಾಗಿ

ವಿಷಯ ಹಬ್ಬ

ಮಂಗಳ  ಗೌರೀ ವ್ರತದ ಮಹಿಮೆ
 
   ಸಮನ್  ಮತ್ತು ಸುವರ್ಣ ರದು ಅನ್ಯೋನ್ಯ ದಾಂಪತ್ಯ  ಪ್ರತೀ  ವರ್ಷ  ಶ್ರಾವಣ ಮಾಸದ ಮಂಗಳಗೌರಿ ವ್ರತವನ್ನು ಬ್ ನಿಷ್ಠೆಯಿಂದ ಮಾಡುತ್ತಿದ್ದ ಸುವರ್ಣಳಿಗೆ ಮಂಗಳಗೌರಿಯ  ಬಗ್ಗೆ ಅತ್ಯಂತ ಶ್ರದ್ದಾಭಕ್ತಿ ಗಂಡನ ಆಯುಷ್ಯ ಆರೋಗ್ಯಕ್ಕಾಗಿ ತಪ್ಪದೆ ದೇವಿಯಲ್ಲಿ ಬೇಡುತ್ತಿದ್ದಳು. ಅದೊಂದು ದಿನ   ಸಮನ್ ಆಫೀಸಿನಿಂದ ಬರುವಾಗ ಆಪಘಾತವಾಗಿ  ತೀವ್ರ ರಕ್ತಸ್ರಾವದಿಂದ  ಕೊನೆಯುಸಿರು  ಎಳೆಯುವ ಪ್ರಯತ್ನದಲ್ಲಿದ್ದ.   ಅವನು ಬದುಕುವ ಆಸೆಯನ್ನು ಬಿಟ್ಟ ವೈದ್ಯರು ಅವನನ್ನು  ಮನೆಗೆ ಕರೆದೊಯ್ಯಲು ತಿಳಿಸಿದರು   ಗಂಡನ ಸ್ಥಿತಿ ಕಂಡು  ದುಃಖತಪ್ತಳಾದ ಸುವರ್ಣ ಮಂಗಳಗೌರಿಯನ್ನು ಅನನ್ಯ ಭಕ್ತಿಯಿಂದ ಬೇಡಿಕೊಳ್ಳುತ್ತಾ  ಕಣ್ಣು ಮುಚ್ಚಿ  ದೇವರ  ಕೋಣೆಯಲ್ಲಿ ಕುಳಿತು ಬಿಟ್ಟಳು ಅವಳ ಕಣ್ಣಿನಿಂದ ಧಾರಾಕಾರ ನೀರು ಸುರಿಯುತ್ತಿತ್ತು  .ಇದ್ದಕ್ಕಿದ್ದಂತೆ   ಸಮನ್   ಕಣ್ಣು ಬಿಟ್ಟು ಸುತ್ತಲೂ ನೋಡಿ  ಸಣ್ಣಗೆ  ನರಳುವ ಸ್ವರ ಕೇಳಿ ಸಂತೋಷದಿಂದ ಸುವರ್ಣ ಗಂಡನ ಹತ್ತಿರ ಹೋಗಿ ಮಂಗಳ ಗೌರಿಯ ಪ್ರಸಾದವನ್ನು ಅವನ ಹಣೆಗೆ ಇಟ್ಟು ತನ್ನ ಸ್ನೇಹಿತೆಯ ಸಹಾಯದಿಂದ ಪುನ ಆಸ್ಪತ್ರೆಗೆ ಸೇರಿಸಿದಳು  ಮಂಗಳಗೌರಿಯ ಕೃಪೆಯಿಂದ   ಸಮನ್ ಒಂದೇ ವಾರದಲ್ಲಿ  ಗುಣಮುಖನಾಗಿ ಮನೆಗೆ ಬರುವಂತಾದನು 
   99  ಶಬ್ದ 
  
  ಪಂಕಜಾ.ಕೆ. ಮುಡಿಪು

Comments

Popular posts from this blog

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ಗುಣಗಳು ಎದ್ದು ಕಾಣುತ್

ಚಂದಿರ ಕವನ

ಚಂದಿರ ಕಾರಿರುಳ  ರಾತ್ರಿಯಲಿ ಮೋಡದ ಮರೆಯಿಂದ ಇಣುಕುತ ಬರುತಿಹನು ಬೆಳ್ಳಿಯತಟ್ಟೆಯ ತರದಲಿ ತೇಲುತ ತಾರೆಗಳನೊಡನಾಡುತ ಬರುತಿಹನು ರಸಿಕರ ಎದೆಯಲಿ ಕನಸನು ತುಂಬುತ ಮೈಮನಕೆಲ್ಲಾ ತಂಪನು ತರುತಿಹನು ಒಲವರಸವನು ಹರಿಸುತ ಮನದಲಿ ಸಂತಸ ಸಂಭ್ರಮ ತುಂಬುವನು ಬಾನಲಿಇಣುಕುವ ಚಂದ್ರನ ಕಂಡು ತನ್ನೊಡನಾಡಲು ಬರುವನು ಎಂದು ನೈದಿಲೆ ಮೊಗವನು ಅರಳಿಸಿತು ಮುಗ್ದ ಮಗುವಿನ ತೆರದಲಿ ನಗುತ ಜೀವಕೆ ಉಲ್ಲಾಸವ ತುಂಬುವನು ಮೋಡದ ಮರೆಯಲಿ ಇಣುಕುವ ಚಂದ್ರನ ಕಾಣುತ ನನ್ನನು ನಾನೇ ಮರೆಯುವೆನು ಪಂಕಜಾ.ಕೆ

ಮಗು..ನಗು

ಮಗು...ನಗು ಅರಳಿದೆ ತನುವು ನಿನ್ನೊಲವ ಸವಿದು ಸಂತಸದ ಹೊನಲು ಹರಿಯುತ್ತಿದೆಇಂದು ಒಲವಿನಾ ಬಳ್ಳಿಯು ಚಿಗುರುತಿದೆ ನಮ್ಮೊಲವಿಗೆ ಸಾಕ್ಷಿಯಾಗಿ ನಗುತಿದೆ ಮನದಲಿ  ಮುದ ತುಂಬಿದೆ ಇನಿಯ ಒಡಲೆಲ್ಲಾಹರಿದಾಡಿನೀಡುವನು  ಕಚಗುಳಿಯ ಕಂದಮ್ಮ ಮನೆ ತುಂಬಾ ನಲಿದಾಡಿ ಕೊಡುವನು ಸಂತಸವ ಬಾಳೆಲ್ಲ ಹರಿದಾಡಿ ಮುದ್ದು ಮಗುವಿನ ಆಟ ಪಾಠ ತುಂಬಿದೆ ಮನೆಯಲಿ ಸಂತಸದ ಕೂಟ ಆತನ ಬಾಲ ಲೀಲೆಗಳೇನು ಚೆನ್ನ ನಂದಗೋಕುಲ ಮಗುವಿರುವ ಮನೆ ಚಿನ್ನ ಬಂಜೆಯೆಂಬ ಸೊಲ್ಲಡಗಿ ಸಂತಸವ ತಂದೆ ನಮ್ಮ ಬಾಳಿಗೆ ತುಂಬಿದ ಹರುಷವನಿಂದೆ ಸಾರ್ಥಕವಾಯಿತು ನನ್ನೀ ಬಾಳು ಇನ್ನಿಲ್ಲ ಮನದಲ್ಲಿ  ಎಂದು ಗೋಳು ಮನೆತುಂಬ ತುಂಬಿದೆ  ಅಳು ನಗು ಮನೆ ಒಳ ಹೊರಗೆಲ್ಲಾ ನಿನ್ನದೇ ಮಗು ನಗುತಿರು ಎಂದೆಂದೂ. ನನ್ನ  ಕಂದ ಬಾಳಲ್ಲಿ ತುಂಬಿರಲಿ ನಿತ್ಯ ಆನಂದ ಪಂಕಜಾ ಕೆ.