ಮಾಡಿದ್ದುಣ್ಣೋ ಮಹರಾಯ
ವೃದ್ದಾಶ್ರಮದ ಬಾಗಿಲಲ್ಲಿ ಕುಳಿತ ಸಾಗರನಿಗೆ ಅಂದೇಕೋ ಬೇಡ ಬೇಡವೆಂದರೂ ಹಳೆಯ ನೆನಪುಗಳು ಮನದಲ್ಲಿ ಸಾಗರದ ಅಲೆಗಳಂತೆ ಉಕ್ಕಿ ಉಕ್ಕಿ ಬರುತ್ತಿತ್ತು. ಚಿಕ್ಕಂದಿನಿಂದ ತನ್ನನ್ನು ಮುದ್ದಿಸಿ ತನ್ನ ಬೇಕು ಬೇಡಗಳನ್ನು ಪೂರೈಸುತ್ತಾ ತಮ್ಮ ಆಸೆ ಅಕಾಕ್ಷೆಗಳನ್ನೆಲ್ಲ ಬದಿಗೊತ್ತಿ ತನಗಾಗಿ ಕಷ್ಟಪಟ್ಟು ಹಗಲಿರುಳೂ ಬೆವರು ಹರಿಸಿ ದುಡಿದ ತಂದೆಯನ್ನು ವೃದ್ದಾಪ್ಯದಲ್ಲಿ ತಾನು ಅನಾಥಾಶ್ರಮಕ್ಕೆ ಸೇರಿಸಿದಾಗ ಅವರು ಎಷ್ಟು ಬೇಸರ ದುಃಖ ಪಟ್ಟಿರಬಹುದು ಎನ್ನುವ ಒಂದು ಚಿಕ್ಕ ಯೋಚನೆ ತನಗೆ ಅಂದು ಬರುತ್ತಿದ್ದರೆ ತಾನು ಇಂದು ಈ ವೃದ್ಧಾಶ್ರಮದಲ್ಲಿ ಮಕ್ಕಳಿದ್ದು ಈ ರೀತಿ ಅನಾಥನಂತೆ ದಿನ ಕಳೆಯುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ತಿಳಿದಾಗ ಪಶ್ಹಾತ್ತಾಪ ದಿಂದ ಸಾಗರನ ಕಣ್ಣುಗಳಿಂದ ನೀರು ಧಾರೆಯಾಗಿ ಹರಿಯಿತು.ತಂದೆಯನ್ನು ತಾನು ಅಂದು ನಡೆಸಿಕೊಂಡ ರೀತಿ ನೆನೆದು ಆತ ನಾಚಿಕೆಯಿಂದ ಮುಖ ಕೆಳಗೆ ಹಾಕಿ ಕುಳಿತುಕೊಂಡ
ಪಂಕಜಾ.ಕೆ ಮುಡಿಪು
ಕುರ್ನಾಡು.ದ.ಕ
Comments
Post a Comment