ಅರಿವು ಮೂಡಿದಾಗ ಶ್ರೀಮಂತನಾದ ರಮೇಶನಿಗೆ ತಂದೆ ಕೇಳಿ ಕೇಳಿದಾಗಳೆಲ್ಲಾ ಹಣ ಕೊಡುತ್ತಿದ್ದುದರಿಂದ , ಹಣದ ಬೆಲೆ ತಿಳಿದಿರಲಿಲ್ಲ . ಕಾಲೇಜಿಗೆ ನೆಪ ಮಾತ್ರಕ್ಕೆ ಹೋಗುತ್ತಾ ಗೆಳೆಯರ ಜತೆ ಅಲ್ಲಿ ಇಲ್ಲಿ ತಿರುಗಾಡಿ ಮಜಾ ಮಾಡುವುದೇ ಅವನ ಕಾಯಕವಾಗಿತ್ತು. ಬಡವರೆಂದರೆ ತಾತ್ಸಾರ ಮನೊಭಾವ ಹೊಂದಿದ್ದ ಆತ, ಹರಿದ ಬಟ್ಟೆ ಹಾಕಿದ ಬಡವರನ್ನು ಕಂಡರೆ ದೂರ ಸರಿಯುತ್ತಿದ್ದ. ಒಂದು ದಿನ ಸ್ನೇಹಿತರೆಲ್ಲ ಸೇರಿ ಜಾಲಿ ರೈಡ್ ಹೋಗುವುದೆಂದು ನಿರ್ಣಯಿಸಿದರು. ನಿಶ್ಚಿತ ಸ್ಥಳಕ್ಕೆ ಯಾರು ಮೊದಲು ತಲುಪುತ್ತಾರೋ. ಅವರಿಗೆ 10000 ಬಹುಮಾನ ಎಂದು ಘೋಷಿಸಿದ ರಮೇಶ, ತಾನು ಅವರ ಜತೆ ತನ್ನ ಬೈಕಿನಲ್ಲಿ ಹೊರಡುವ ನಿರ್ಧಾರ ಮಾಡಿದ. ಎಲ್ಲರೂ ಒಂದೊಂದು ದಾರಿ ಹಿಡಿದು ತಮ್ಮತಮ್ಮ ಬೈಕ್ ಚಲಾಯಿಸಿದರು. ರಮೇಶನೂ ವೇಗವಾಗಿ ಬೈಕ್ ಓಡಿಸುತ್ತಾ ಇರುವಾಗ ತಿರುವಿನಲ್ಲಿ ಆಯ ತಪ್ಪಿ ಕೆಳಗಿನ ಪ್ರಪಾತಕ್ಕೆ ಬೈಕ್ ಸಮೇತ ಉರುಳಿ ಬಿಟ್ಟ . ಕಣ್ಣು ಬಿಟ್ಟಾಗ ತಾನೊಂದು ಹುಲ್ಲಿನ ಗುಡಿಸಿಲಿನಲ್ಲಿ ಇರುವುದು ತಿಳಿದು ಆತ ಮೆಲ್ಲಗೆ ಏಳಲು ಪ್ರಯತ್ನಿಸಿದಾಗ , ಮೈ ಕೈಯೆಲ್ಲ ನೋವಾಗಿ ಸಣ್ಣಗೆ ನರಳಿದ .ಅಷ್ಟರಲ್ಲಿ ಅಲ್ಲಿಗೆ ಬಂದ ಕೆದರಿದ ಕೂದಲ ಹರಿದ ಬಟ್ಟೆ ತೊಟ್...