Skip to main content

ಲೇಖನ


ಲೇಖನ 

ವಿಷಯ .ಭ್ರಷ್ಟಾಚಾರ,ರಾಜಕಾರಣ ಮತ್ತು ಸಾಹಿತ್ಯ ನಿರ್ಮಾಣದ ಸವಾಲುಗಳು

ಬ್ರಷ್ಟಾಚಾರವೆನ್ನುವುದು ಇಂದಿನ ದಿನಗಳಲ್ಲಿ ಜನಮಾನಸದಲ್ಲಿ ಹಾಸು ಹೊಕ್ಕಾಗಿದೆ.  ಸರ್ಕಾರಿ ಕಚೇರಿಗಳಲ್ಲಿ ಯಾವ ಕೆಲಸ ವಾಗಬೇಕಿದ್ದರೂ ದುಡ್ಡು ಕೊಟ್ಟರೆ ಮಾತ್ರ ಕೆಲಸ ಆಗಲು ಸಾಧ್ಯ.
ದುಡ್ಡು ಇಲ್ಲದವನನ್ನು ಕೇಳುವವರೇ ಇಲ್ಲವೆಂದಾಗಿದೆ.  ಬ್ರಷ್ಟಾಚಾರವು ಸ್ವಚ್ಛ ಸಮಾಜಕ್ಕೆ ಅಂಟಿದ ಕಳಂಕ.ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಬ್ರಷ್ಟಾಚಾರವು ದಿನದಿಂದ ದಿನಕ್ಕೆ  ತನ್ನ ಕಬಂಧ ಬಾಹುವನ್ನು ಚಾಚಿ ಎಲ್ಲೆಡೆಯೂ ಹಬ್ಬಿದೆ .  ರಾಜಕಾರಣವು ಅವ್ಯವಸ್ಥೆಯ ಆಗರವಾಗಿದೆ. ಮೇಲಿನಿಂದ ಕೆಳಗಿನವರೆಗೂ,ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.ಜನಸಾಮಾನ್ಯ ಇದರ ಕಪಿ ಮುಷ್ಠಿಯಲ್ಲಿ ಸಿಲುಕಿ ನರಳುತ್ತಿದ್ದಾನೆ . ಪ್ರತಿಯೊಬ್ಬರು ತಮ್ಮ ಸುಖವನ್ನು ಮಾತ್ರ ಕಂಡು ಕೊಳ್ಳುವ ಮನೋಭಾವ ಬೆಳೆಸಿಕೊಂಡಿದ್ದಾರೆ. ಇದರಿಂದಾಗಿ ಅಭಿವೃದ್ಧಿ ಕಾರ್ಯಕ್ಕಾಗಿ ಮೀಸಲಿಟ್ಟ ಹಣವೆಲ್ಲವು ಭ್ರಷ್ಟ ರಾಜಕಾರಣಿಗಳಿಂದಾಗಿ ಸೇರಬೇಕಾದ ಕಡೆ ಸೇರದೆ ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದೆ. ಬ್ರಷ್ಟಾಚಾರವೆನ್ನುವುದು ಎಂದು ನಿರ್ಮೂಲನವಾಗುವುದೋ ಅಂದೇ ಭವ್ಯ ಭಾರತದ ನಿರ್ಮಾಣ ಸಾಧ್ಯ.ಆದರೆ ಪಾರ್ಥೇನಿಯಂ ಕಳೆಯಂತೆ ಇದರ ನಿಯಂತ್ರಣ ಸುಲಭವಲ್ಲ.
          ಬ್ರಷ್ಟಾಚಾರವು ಸಾಹಿತ್ಯಕ್ಷೇತ್ರಕ್ಕೂ ತನ್ನ ಕಬಂಧ ಬಾಹುವನ್ನು ಚಾಚಿದೆ .ಇದರಿಂದಾಗಿ ಅರ್ಹರಿಗೆ ಅವಕಾಶ ಸಿಗದೆ ಅನರ್ಹರೇ  ಗುರುತಿಸಿಕೊಳ್ಳುವಂತಾಗಿದೆ.ಹಣ ಕೊಟ್ಟು ಪ್ರಶಸ್ತಿ ಪಡೆಯುವ ಒಂದು ಗುಂಪೇ ಇಲ್ಲಿ ತುಂಬಿ ತುಳುಕಿದೆ .ಇದರಿಂದಾಗಿ ಅರ್ಹ ಸಾಹಿತಿಗಳು ಪ್ರಶಸ್ತಿಯಿಂದ ವಂಚಿತರಾಗುವ ದೌರ್ಭಾಗ್ಯ ಬಂದೊದಗಿದೆ.   ಹಣದ ಆಮಿಷಕ್ಕೆ ಬಲಿಯಾಗದೆ ಅರ್ಹರನ್ನು ಗುರುತಿಸಿ, .ಪ್ರೋತ್ಸಾಹಿಸುವ ಕೆಲಸ ಮಾಡುವವರಿದ್ದರೆ ಮಾತ್ರ ಸಾಹಿತ್ಯ ಕ್ಷೇತ್ರ ಉಳಿಯಲು ಸಾಧ್ಯ .ಇಲ್ಲವಾದರೆ ಸಾಹಿತ್ಯ  ಎನ್ನುವುದು ಒಂದು ಪ್ರಶಸ್ತಿಗಳನ್ನು ಕೊಂಡು ಕೊಳ್ಳುವ ಸಂತೆಯಾದರೂ ಅಚ್ಚರಿಯಿಲ್ಲ
          
          ಪಂಕಜಾ.ಕೆ. ಮುಡಿಪು
          ನಿವೃತ್ತ ಅಸ್ಸಿಸ್ಟಂಟ್ ಪೋಸ್ಟ್ ಮಾಸ್ಟರ್ 
          ಶ್ರೀ ಗಣೇಶಕೃಪಾ. ಮುಡಿಪು. ಅಂಚೆ.ಕುರ್ನಾಡು.ದ.ಕ.574153

Comments

Popular posts from this blog

ನವಪರ್ವಕ್ಕೆ ಕಳಿಸಿದ ಪದ್ಯ

[13/01, 10:13 PM] pankajarambhat: ಕಾಗೆ ಬೆಳಗಿನ ಜಾವವೇ  ಬೇಗನೆ ಏಳುತ ಪರಿಸರ ಶುಚಿಯನು ಮಾಡುವುದು ಕಾಳನು ಕಂಡರೆ ಕಾ ಕಾ ಎನುತ ತನ್ನಯ ಬಳಗವ ಕರೆಯುವುದು ಮರದಲ್ಲಿ ಕುಳಿತು ಕತ್ತನು ಕೊಂಕಿಸಿ ಕಸವನು ಸೇರಿಸಿ ಸುಂದರ ಮನೆಯನು ಕಟ್ಟುವುದು ತನ್ನಯ ಮನೆಯಲಿ  ಕೋಗಿಲೆ ಮರಿಗೂ ಕಾವನು ಕೊಡುತ ಬೆಳೆಸುವುದು ಕಪ್ಪನೆ ಇದ್ದರೂ ಚೊಕ್ಕಟ ವಿರುವ ಗುಣವನು ತಾನು ಕಲಿತಿಹುದು ಏನೇ ಕಂಡರೂ ಬಳಗವ ಕರೆಯುತ ಹಂಚಿಯೇ ಅದನು ತಿನ್ನುವುದು  ಕಾಗೆಯ ಕಂಡರೆ  ಅನಿಷ್ಟವೆನುತ ದೂರಕೆ ಓಡಿಸುತ್ತಿರುವರು ಶ್ರಾದ್ಧದ ದಿನದಲಿ ಕಾಗೆಯ ಕರೆಯುತ ಕಾ ಕಾ ಎನುತ ಕಾಯುವರು ಸ್ವಾರ್ಥ ಬುದ್ಧಿಯ ಮನುಜ ಕಲಿವನೆ ನಿನ್ನಯ ಒಳ್ಳೆಯ ಗುಣಗಳನು ಹಕ್ಕಿಗಳಲ್ಲಿ ನೀನೆ ಗುಣದಲಿ ಶ್ರೇಷ್ಠವಾಗಿರುವೆಯಲ್ಲ ಕೊಡದಿಹರೇಕೆ  ಮನ್ನಣೆ ಯನ್ನು ಜಗದ ಜನರು ನಿನಗೆ ಪಂಕಜಾ.ಕೆ [13/01, 10:17 PM] pankajarambhat: ನನ್ನ ಪರಿಚಯ ಗಜಲ್ ನಾನಾಗಿದ್ದೆ ಅಂಚೆ ಇಲಾಖೆಯ  ದಕ್ಷ ಕೆಲಸಗಾತಿ  ಸ್ವಯಂ  ನಿವೃತ್ತಿಯ  ನಂತರ ಸಂಪೂರ್ಣ  ಮನೆಯೊಡತಿ  ನನ್ನ ಮೊದಲ ಕವನ ಸಂಕಲನ ಸಾವಿತ್ರಿ ಬಿಡುಗಡೆಯ ಮಾಡಿ ನಾನಾದೆ ಕವನಗಳೊಡತಿ  ಹೊಲಿಗೆ  ಕಸೂತಿ ಕೈತೋಟ ಮನೆವಾರ್ತೆ ನನ್ನ ಹಾಬಿ ಮನದಲ್ಲಿ ಬರೆವ ತುಡಿತವಿರಲು ನಾ ಇಂದು ಬರಹಗಾತಿ ದಕ್ಷಿಣ ಕನ್ನಡದ  ಮುಡಿಪು ಮೆಚ್ಚಿನ  ನನ್ನೂರು ಕೊಡಕ್ಕಲ್ಲು ವೆಂಕಟ್ರಮಣ ಭಟ್ ಸಾವಿತ್ರಿ ದಂ...

ರಕ್ತದಾನ ಕವನ ಮತ್ತು ವಿಮರ್ಶೆ

[04/07, 8:09 PM] pankajarambhat: ರಕ್ತದಾನ ಅವಸರದ ಕ್ಷಣಗಳಲಿ ಅಪಘಾತಗಳ ಸುಳಿಯಲಿ ಕಳೆದು ಕೊಂಡಿಹ ರಕ್ತ ತುಂಬಿಸಲು ಬಲು ಕಷ್ಟ ಮಾನವ ಜೀವನ ಅನಿತ್ಯ ರಕ್ತದಾನವೊಂದೇ ಸತ್ಯ ಉಸಿರು ಉಳಿಸುವ ಶಕ್ತಿ ರಕ್ತದಾನಿಯ ಬುತ್ತಿ ಮಾನವತೆಯ ಬಂಧ ರಕ್ತದಾನ ದ ಅನುಬಂಧ ರಕ್ತದಾನ ಒಂದು ಮಹಾದಾನ ಆರೋಗ್ಯ ಭಾಗ್ಯದ ಪಾನ ಬಡವ ಬಲ್ಲಿದ ಭೇಧವಿಲ್ಲ ಜಾತಿ ವಿಜಾತಿಗಳ ಲೆಕ್ಕವಿಲ್ಲ ಹರಿವುದೊಂದೇ ರಕ್ತ ಮನುಜ ಇದರಿಂದ ಶಕ್ತ ರಕ್ತವೆನ್ನುವ ಅಮೃತ ಅದಿಲ್ಲದಿರೆ ಮನುಜ ಮೃತ ರಕ್ತದಾನವ ಮಾಡಬೇಕು ಇನ್ನೊಬ್ಬರ ಪ್ರಾಣ ಉಳಿಸಬೇಕು  ದಾನ ಮಾಡಿದ ರಕ್ತ ತುಂಬುವುದು ನಿತ್ಯ ಬೇಕಿಲ್ಲ ಇದರಲ್ಲಿಭಯ ಉಳಿಸಬೇಕು ನೊಂದಜೀವ ಮಾಡಿ ಬಿಡು ರಕ್ತದಾನ ಕೊಟ್ಟುಬಿಡು ಜೀವದಾನ ಬೇರಿಲ್ಲಇದಕೆ ಸಾಟಿಯದ ದಾನ ರಕ್ತದಾನವೊಂದು ಮಹಾದಾನ ಉಸಿರು ಹೋಗುವ ಮುನ್ನ ಮಾಡಿಬಿಡು ರಕ್ತದಾನ ಸ್ವ ಇಚ್ಛೆಯಿಂದ ಕೊಟ್ಟ ದಾನ  ಕೊಟ್ಟೀತು ಮನಕೆ  ಸಮಾಧಾನ ಪಂಕಜಾ.ಕೆ. ಮುಡಿಪು [04/07, 8:28 PM] +91 94493 26765: ರಕ್ತ ದಾನ ಜೀವವನ್ನೆ ಉಳಿಸುತ್ತೆ ಇದಕ್ಕಿಂದ ಬೇರೆ ದಾನ ಬೇಕೆ. ಸುಂದರ ಕವನ 💐🙏🏻 [04/07, 8:47 PM] +91 96638 12303: ರಕ್ತದಾನದ ಮೇಲೆ ಬರೆದ ಕವನ ಅರ್ಥವತ್ತಾಗಿ,  ಸಂದೇಶಭರಿತವಾಗಿದೆ. ಅಭಿನಂದನೆಗಳು ಮೇಡಂ [04/07, 9:20 PM] +91 72595 69643: ರಕ್ತದಾನ ಜೀವದಾನ. ನೀವು ಬರೆದ ಸಾಲುಗಳು ಅದೆಷ್ಟು ಜೀವಿಗಳನ್ನು ಕಾಪಾಡುವ ಮಾನವೀಯತೆ, ಸೌಜನ್ಯತೆ ಮತ್ತು ಸಹಾಯ ...

ಗಜಲ್ ಬಗ್ಗೆ

[06/06, 9:41 AM] pankajarambhat: ಗಜಲ್ ಪಾಠ ಗಜಲ್ ಕಲಿಯಲು ಆಸಕ್ತಿ ಇದ್ದವರಿಗಾಗಿ ಒಂದು ಪ್ರಯತ್ನ ಗಜಲ್ ಮುಖ್ಯವಾಗಿ ಇರಬೇಕಾದ ಅಂಶಗಳು *ದ್ವೀಪದಿ* *ಮತ್ಲಾ* *ರದೀಫ್* *ಕಾಫಿಯ* *ಷೇರುಗಳು* *ಮಖ್ತ* ಇಷ್ಟು ವಿಷಯಗಳು ನೆನಪಿರಬೇಕಾದ ಅಂಶಗಳು *ದ್ವೀಪದಿ*- ಗಜಲ್ ಮುಖ್ಯವಾಗಿ ದ್ವೀಪದಿ ಗಳಲ್ಲಿ ಇರಬೇಕು.ಎರಡೆರಡು ಸಾಲುಗಳಲ್ಲಿ *ಮತ್ಲಾ*- ಎಂದರೆ ಗಜಲ್ ನ ಮೊದಲ ಚರಣ. ಇದು ದ್ವೀಪದಿಯಲ್ಲಿದ್ದು ಇದರ ಎರಡು ಚರಣದ ಕೊನೆಯಲ್ಲಿ ಒಂದೇ ರೀತಿಯ ಪ್ರಾಸಗಳು ಬರಬೇಕು ಕಾಫಿಯ ದ ಕೊನೆಯ ಮತ್ತು ರದೀಫ್ ಪ್ರಾಸವಾಗಿದ್ದು ಮುಂದಿನ ಎಲ್ಲಾ ಷೇರುಗಳಲ್ಲಿ ಇದು ಕಡ್ಡಾಯವಾಗಿ ಬರಬೇಕು *ರದೀಫ್*- ಇದು ಒಂದು ಪ್ರಾಸ . ಕಾಫಿಯ ದ ನಂತರ ಎಲ್ಲಾ ಷೇರು ಗಳಲ್ಲಿ  ಮತ್ತೆ ಮತ್ತೆ ಬರುವ ಪದ. ಇವು ಅರ್ಥವುಳ್ಳದಾಗಿದ್ದು ಗಜಲ್ ಗೆ ಮೆರಗು ನೀಡಲು ಸಹಕಾರಿ ರದೀಪ್ ಇಲ್ಲದೆ ಗಜಲ್ ಬರೆಯಬಹುದು ಆದರೆ ಹೆಚ್ಚ ಚಾಲ್ತಿ ಇರೋದು ರದೀಪ್ ಇರುವ ಗಜಲ್ *ಕಾಫಿಯ*- ಇದು ರದೀಪ್ ನ ಹಿಂದೆ ಬರುವ ಪದದ ಕೊನೆಯ ಅಕ್ಷರ. ಇಲ್ಲಿ ಇದಕ್ಕೆ ರವಿ ಎನ್ನುತ್ತಾರೆ ಇದು ಪ್ರಾಸವಾಗಿರುತ್ತದೆ ಆದರೆ ಕೊನೆಯ ಅಕ್ಷರ ಮಾತ್ರ ಒಂದೇ ಆಗಿರಬೇಕು ಕಾಫಿಯಾ ಯಾವಾಗಲು ಒಂದೇ ಆಗಿರಬಾರದು. ಉದಾ: ಬದುಕಿಸಿ, ಸಾಯಿಸಿ,ಬಯಸಿ ಹೀಗೆ ಇಲ್ಲಿ *ಸಿ*  ರವಿ ಆಗಿರುತ್ತದೆ ರವಿ ಇರುವ ಪದ ಕಾಫಿಯ ಆಗುತ್ತದೆ ಅವು ಬೇರೆ ಬೇರೆ ಆಗಿರಬೇಕು *ಷೇರುಗಳು*- ಎಂದರೆ ದ್ವಿಪದಿಯಲ್ಲಿರುವ ಚರಣಗಳು *ಮಖ್ತ*- ಇದು ಕೊನೆಯ ದ್ವಿಪ...